ಉಡುಪಿ ಜಿಲ್ಲೆ ಆರಂಭಗೊಂಡು 25 ವಸಂತಗಳ ಹಿನ್ನಲೆಯಲ್ಲಿ , ರಜತ ಮಹೋತ್ಸವ ಕಾರ್ಯಕ್ರಮವು ಆಗಸ್ಟ್ 25 ರಿಂದ ವಿವಿಧ ಹಂತಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನಡಯಲಿದ್ದು, ರಜತ ಮಹೋತ್ಸವ ಕಾರ್ಯಕ್ರಮದ ಅಂದವಾದ ಲಾಂಛನವನ್ನು , ಟ್ಯಾಗ್ಲೈನ್ ನೊಂದಿಗೆ ರಚಿಸಿ, ಜಿಲ್ಲಾಡಳಿತಕ್ಕೆ ನೀಡಲು ಸಾರ್ವಜನಿಕರಿಂದ ಲಾಂಛನ ವಿನ್ಯಾಸಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕರು ರಚಿಸಿದ ಅತ್ಯುತ್ತಮ ಒಂದು ಲಾಂಛನವನ್ನು ಆಯ್ಕೆ ಮಾಡಿಕೊಳ್ಳಲಾಗುವುದು , ಆಯ್ಕೆಯಾದ ಲಾಂಛನಕ್ಕೆ ರೂ.10000 (ರೂಪಾಯಿ ಹತ್ತು ಸಾವಿರಗಳು) ಗಳ ಬಹುಮಾನ ನೀಡಲಾಗುವುದು. ಲಾಂಛನವನ್ನು ಜಿಲ್ಲಾಧಿಕಾರಿ ಕಛೇರಿಯ ಈಮೇಲ್ ವಿಳಾಸ [email protected] ಕ್ಕೆ ಆಗಸ್ಟ್ 16 ರೊಳಗೆ ನೀಡಲು ಕೋರಲಾಗಿದೆ.