ಕೇಂದ್ರ ಬಜೆಟ್ ಋಣ ಸಂದಾಯದ ಬಜೆಟ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ 2024-25 ರ ಬಜೆಟ್ ಮಂಡನೆ ಮಾಡಿದ್ದು ಇದು ದೇಶದ ಬಜೆಟ್ ಅಲ್ಲಾ.ಎರಡು ರಾಜ್ಯಗಳನ್ನು ಕೇಂದ್ರೀಕರಿಸಿದ ಋಣ ಸಂದಾಯದ ಬಜೆಟ್ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜಾ ಉತ್ತಪ್ಪ ಟೀಕಿಸಿದ್ದಾರೆ.

ಬಿಹಾರ ಮತ್ತು ಆಂದ್ರಪ್ರದೇಶದ ಜೆಡಿಯು ಹಾಗೂ ಟಿಡಿಪಿ ಎನ್.ಡಿ.ಎ ಸರ್ಕಾರಕ್ಕೆ ನೀಡಿದ ಬೆಂಬಲಕ್ಕೆ ಪ್ರತಿಯಾಗಿ ಋಣ ತೀರಿಸಲು 140 ಕೋಟಿ ಜನತೆಯ ತೆರಿಗೆ ಹಣವನ್ನು ಬಳಕೆ ಮಾಡಿದ್ದಾರೆ ಎಂದು ಟೀಕಿಸಿರುವ ಧರ್ಮಜಾ ಉತ್ತಪ್ಪ ರವರು ಕರ್ನಾಟಕ ರಾಜ್ಯವನ್ನು ಮೋದಿ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
26 ಸಾವಿರ ಕೋಟಿ ಬಿಹಾರ ರಾಜ್ಯಕ್ಕೆ ,15 ಸಾವಿರ ಕೋಟಿ ಆಂಧ್ರಪ್ರದೇಶದ ರಾಜ್ಯಕ್ಕೆ ನೀಡಿ ಕರ್ನಾಟಕ ಮತ್ತು ಇತರ ರಾಜ್ಯಗಳಿಗೆ ಮಲತಾಯಿ ಧೋರಣೆ ಮಾಡಿದ್ದಾರೆ ಎಂದು ಧರ್ಮಜಾ ಉತ್ತಪ್ಪ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸಿದ್ದಾರೆ.

ಒಕ್ಕೂಟದ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯವನ್ನು ಸಮಾನವಾಗಿ ಕಾಣವುದು ಕೇಂದ್ರ ಸರ್ಕಾರದ ಹೊಣೆಗಾರಿಕೆಯಾಗಿದೆ.


ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಕೇಂದ್ರ ಸರ್ಕಾರ ಕಡೆಗಣಿಸಿರುವುದು ಸ್ಪಷ್ಟವಾಗಿದೆ.ಪ್ರತಿ ಬಾರಿ ಅತಿ ಹೆಚ್ಚಿನ ಲೋಕ ಸಭಾ ಸದಸ್ಯರನ್ನು ಬಿಜೆಪಿ ಪಕ್ಷದಿಂದ ಆರಿಸಿ ಕರ್ನಾಟಕ ಜನತೆ ಕಳುಹಿಸುತ್ತಿದ್ದರೂ ಕರ್ನಾಟಕಕ್ಕೆ ಎನ್.ಡಿ.ಎ ಸರ್ಕಾರ ಅನ್ಯಾಯ ಮಾಡುತ್ತಿರುವುದು ಕಾಣಿಸುತ್ತಿದೆ. ಕರ್ನಾಟಕ ರಾಜ್ಯ ಅತಿವೃಷ್ಠಿಯಿಂದ ತತ್ತರಿಸುತ್ತಿರುವ ಸಂಧರ್ಭದಲ್ಲಿ ವಿಶೇಷ ಪ್ಯಾಕೆಜ್ ನಿರೀಕ್ಷೆ ಮಾಡಲಾಗಿತ್ತು.ಆದರೆ ರಾಜ್ಯದ ಜನತೆಯ ಮೇಲಿನ ಆಕ್ರೋಶ ವೋ ಅಥವಾ ರಾಜ್ಯ ಸರ್ಕಾರದ ಮೇಲಿನ ಆಕ್ರೋಶ ವೋ ಗೊತ್ತಿಲ್ಲ ಎಂದು ಹೇಳಿದ್ದಾರೆ. ಪ್ರತಿ ಬಾರಿ ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯವಾಗುತ್ತಿದೆಜಿ,ಎಸ್,ಟಿ ಹಂಚಿಕೆಯಲ್ಲಿಯೂ ರಾಜ್ಯದ ಪಾಲಿನ ಹಣ ಕಡಿತಗೊಳಿಸಿ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡಿದೆ ಎಂದು ಧರ್ಮಜಾ ಬೇಸರ ವ್ಯಕ್ತಪಡಿಸಿದ್ದಾರೆ.

Latest Indian news

Popular Stories