ಕೊಡಗು | ಬಾಳುಗೋಡಿನಲ್ಲಿ ಯುವಕ ನೀರುಪಾಲು

ಕೊಡಗು: ಸ್ನಾನಕ್ಕೆಂದು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಪ್ರದೀಪ್ (20) ಸಾವನ್ನಪ್ಪಿದ ಯುವಕನಾಗಿದ್ದಾನೆ.

7ನೇ ಹೊಸಕೋಟೆ ಗ್ರಾಮದ ನಿವಾಸಿ ಸುರೇಶ್ ಎಂಬವರ ಪುತ್ರ ಗುಡ್ಡೆಹೊಸೂರು ಬಳಿಯ ಬಾಳುಗೋಡಿನಲ್ಲಿ ದುರ್ಘಟನೆ ಸಂಭವಿಸಿದೆ.

ಯುವಕ ಪ್ರದೀಪ್ ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಸಂದರ್ಭ ಘಟನೆ ನಡೆದಿದ್ದು ಮೃತದೇಹ ಮೀನಿನ ಗಾಣ ಹಾಗೂ ಬಲೆಗಳಿಗೆ ಸಿಲುಕಿದ ಸ್ಥಿತಿಯಲ್ಲಿದೆ ಎನ್ನಲಾಗಿದೆ.

ಮೃತದೇಹವನ್ನು ನೀರಿನಿಂದ ಮೇಲೆತ್ತುವ ಕಾರ್ಯಾಚರಣೆ ನಡೆದಿದೆ.

Latest Indian news

Popular Stories