ಕೊಡಗು ಜಿಲ್ಲೆ ವಿರಾಜಪೇಟೆಯ ಬೋರೇಗೌಡ ಕಾಂಪ್ಲೆಕ್ಸ್ ನ ಮಾಲೀಕರು, ಕೊಡಗು ಜಿಲ್ಲಾ ಪರಿಷತ್ ನ ಮಾಜಿ ಸದಸ್ಯರು, ರಾಜ್ಯ ಕುರುಬರ ಸಂಘದ ಕಾರ್ಯಧ್ಯಕ್ಷರಾಗಿ ಹಲವು ವರ್ಷಗಳು ಸೇವೆ ಸಲಿಸಿದ್ದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ಕೆ.ಬಿ ಶಾಂತಪ್ಪ ರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಳಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರ ಅನುಮೋದನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಆದೇಶ ಪತ್ರ ನೀಡಿದ್ದಾರೆ. ಇಂದು ನಡೆದ ಸಭೆಯಲ್ಲಿ ನೇಮಕ ಪತ್ರದ ಆದೇಶ ಪ್ರತಿಯನ್ನು ನೀಡಿ ಮುಂಬರುವ ಲೋಕಸಭಾ ಚುನಾವಣೆಯ ಜವಾಬ್ದಾರಿಯ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಕೆ ಬಿ ಶಾಂತಪ್ಪ ತಿಳಿಸಿದ್ದಾರೆ.