ಕೊಡಗು: ಕಾಡಾನೆ ದಾಳಿಯಿಂದ ವ್ಯಕ್ತಿ ಮೃತ್ಯು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳಿಂದ 15 ಲಕ್ಷ ರೂಪಾಯಿ ಚೆಕ್ ಹಸ್ತಾಂತರ

ಇಂದಿನಿಂದ ಈ ಭಾಗದಲ್ಲಿ ಆನೆ ಓಡಿಸಲು ಕಾರ್ಯಾಚರಣೆ

ಕಾಡಾನೆ ತುಳಿತಕ್ಕೆ ಮೃತಪಟ್ಟ ಬೀರುಗ ಗ್ರಾಮದ ಅಯ್ಯಮಡ ಮಾದಯ್ಯ ಅವರ ಕುಟುಂಬಕ್ಕೆ ಡಿ. ಎಫ್.ಓ ಭಾಸ್ಕರ್ ರವರು 15ಲಕ್ಷ ರೂಪಾಯಿ ಚೆಕ್ಕನ್ನು ಹತ್ತಾಂತರಿಸಿದ್ದಾರೆ. ಈ ಸಂದರ್ಭ ವಿಧಾನಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಎ.ಸಿ.ಎಫ್ ನೆಹರು, ರೈತ ಸಂಘದ ಪ್ರಮುಖರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಘಟನಾ ಸ್ಥಳದಲ್ಲಿ ಬೆಳಗಿನಿಂದ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಾ ಹಿರಿಯ ಅಧಿಕಾರಿಗಳು ಬರುವವರೆಗೆ ಮೃತದೇಹವನ್ನು ಸ್ಥಳದಿಂದ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದರು ನಂತರ ಅಧಿಕಾರಿಗಳು ಆಗಮಿಸಿದ ನಂತರ ತೀವ್ರ ಆಕ್ರೋಶ ವ್ಯಕ್ತಪಡಿಸಿ ಇಂದಿನಿಂದಲೇ ಕಾರ್ಯಾಚರಣೆ ಆರಂಭಿಸಿ ನಾಡಿನಿಂದ ಕಾಡಿಗೆ ಆನೆಗಳನ್ನು ಅಟ್ಟುವಂತೆ ತಾಕಿತ್ತು ಮಾಡಿ ಇದಕ್ಕೆ ಒಪ್ಪಿದ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕಾರ್ಯಾಚರಣೆ ಆರಂಭಿಸುವುದಾಗಿ ಒಪ್ಪಿಕೊಂಡ ನಂತರ ಮೃತ ದೇಹವನ್ನು ಕುಟುಂಬಸ್ಥರು ಪಡೆದುಕೊಂಡರು.

Latest Indian news

Popular Stories