ಕೋಲಾರ:ವಸತಿ ಶಾಲೆಯ ಮಕ್ಕಳನ್ನು ಮೊಲದ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಿರುವ ಅಮಾನವೀಯ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಯಳವಳ್ಳಿ ಗ್ರಾಮದಲ್ಲಿ ನಡೆದಿದೆ.
ಕಳೆದ ಹಲವು ದಿನಗಳಿಂದ ಮಕ್ಕಳಿಗೆ ಕಿರುಕುಳ ನೀಡಲಾಗುತ್ತಿದೆ.ಮಕ್ಕಳಿಗೆ ಥಳಿಸುತ್ತಿರುವ ಹಾಗೂ ಶಿಕ್ಷೆ ಕೊಡುತ್ತಿರುವ ವಿಡಿಯೋ ಲೀಕ್ ಆಗಿದ್ದು,ರಾತ್ರಿ ಹೊತ್ತು ಬ್ಯಾಗ್ ಹೊರೆಸಿ ಮಕ್ಕಳಿಗೆ ಕಿರುಕುಳ ನೀಡಿದ್ದಾರೆ ಎಂದು ಮಕ್ಕಳ ಪೋಷಕರೂ ಆರೋಪಿಸಿದ್ದಾರೆ. ಮಂಜುನಾಥ್ ಹಾಗೂ ಕೆಲವು ಶಿಕ್ಷಕರಿಂದ ಮಕ್ಕಳಿಗೆ ಕಿರುಕುಳ ಆರೋಪ ಕೇಳಿಬಂದಿದೆ.