ಮಡಿಕೇರಿ ಬಿಜೆಪಿ ಯುವ ಮೋರ್ಚಾ ಸೋಮವಾರಪೇಟೆ ಮಂಡಲದಿಂದ ಬಲಿದಾನ ದಿನ ಆಚರಣೆ

ಮಡಿಕೇರಿ ಮಾ. 24 : ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾದ ಸೋಮವಾರಪೇಟೆ ಮಂಡಲ ವತಿಯಿಂದ ದೇಶದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಬಲಿದಾನ ದಿನವನ್ನು ಆಚರಿಸಲಾಯಿತು.
ಕುಶಾಲನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ಪ್ರೇಮಿ ಭಗತ್ ಸಿಂಗ್, ಸುಖ್ ದೇವ್ ಮತ್ತು ರಾಜ್ ಗುರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭ ಶಿಕ್ಷಣ ಪ್ರಕೋಷ್ಠ ಕೊಡಗು ಜಿಲ್ಲಾ ಸಂಚಾಲಕ ಧನಂಜಯ್ ಮಾರ್ಗದರ್ಶನ ನೀಡಿದರು.
ಮಂಡಲ ಅಧ್ಯಕ್ಷ ಚಂದ್ರಶೇಖರ್ ಹೇರೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ, ಸೋಮವಾರಪೇಟೆ ಮಂಡಲ ಅಧ್ಯಕ್ಷ ಮನುಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಲ್ಲೂರಿಕೊಪ್ಪ ಕೆ. ಮಾದಪ್ಪ, ಮಾಜಿ ಮಂಡಲ ಅಧ್ಯಕ್ಷ ಕುಮಾರಪ್ಪ, ರಾಜ್ಯ ಯುವ ಮೋರ್ಚಾ ಸಮಿತಿ ಸದಸ್ಯ ಮಹೇಶ್ ತಿಮ್ಮಯ್ಯ, ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮೋಹಿತ್, ಪದ್ಮನಾಭ ಹಾಗೂ ಸೋಮವಾರಪೇಟೆ ಮಂಡಲ ಯುವಮೋರ್ಚಾ ಪದಾಧಿಕಾರಿಗಳು, ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು, ಗ್ರಾ.ಪಂ ಶಕ್ತಿಕೇಂದ್ರದ ಯುವ ಮೋರ್ಚ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.

Latest Indian news

Popular Stories