ಕುಮಾರಸ್ವಾಮಿಗೆ ಸಾಮಾನ್ಯ ಜ್ಞಾನವಿಲ್ಲ – ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು: ಕನಕಪುರವನ್ನು ಬೆಂಗಳೂರಿಗೆ ಸೇರಿಸುವುದಾಗಿ ಹೇಳಿರುವ ಡಿ.ಕೆ.ಶಿವಕುಮಾರ್ ಹೇಳಿಕೆ ಹಿಂದೆ ದುರುದ್ದೇಶವಿದೆ ಎಂದು ಬೇನಾಮಿ ಆಸ್ತಿ ಬಾಂಬ್ ಸಿಡಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅವರು ಸಿಎಂ ಆಗಿದ್ದವರು, ಪ್ರಜ್ಞಾವಂತರು ಎಂದಿಕೊಂಡಿದ್ದೆ. ಆದರೆ ಅವರಿಗೆ ಕಾಮನ್ ಸೆನ್ಸ್ ಇಲ್ಲ ಎಂದು ಟಾಂಗ್ ನೀಡಿದ್ದಾರೆ.

ರಾಮನಗರ, ಕನಕಪುರ, ಚನ್ನಪಟ್ಟಣದ ಜನ ಭೂಮಿಯನ್ನು ಮಾರಿಕೊಂಡು ಹೋಗಬೆಡಿ. ಮುಂದಿನ ದಿನಗಳಲ್ಲಿ ಒಳ್ಳೆ ಬೆಲೆ ಬರಲಿದೆ ಎಂದು ಹೇಳಿದ್ದೇನೆ. ಕೋವಿಡ್ ನಂತರ ನಮ್ಮ ಜನ ಭೂಮಿ ಮಾರಿಕೊಳ್ಳುತ್ತಿದ್ದಾರೆ. ಇದು ನಿಲ್ಲಬೇಕು. ಕನಕಪುರ ಮಾತ್ರವಲ್ಲ ರಾಮನಗರ, ಚನ್ನಪಟ್ಟಣ ಎಲ್ಲವೂ ಬೆಂಗಳೂರಿಗೆ ಸೇರಿದ್ದು. ನಾವೆಲ್ಲರೂ ಬೆಂಗಳೂರಿನವರೇ. ರಾಮನಗರ ಜಿಲ್ಲೆಗೆ ಏನು ಮಾಡಬೇಕು ಎಂಬ ನೀಲಿ ನಕ್ಷೆ ಇದೆ. ಕುಮಾರಸ್ವಾಮಿ ಏನೇನೋ ಹೇಳುತ್ತಾರೆ. ಅದಕ್ಕೆ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ಹೇಳಿದರು.

Latest Indian news

Popular Stories