ಮೈಸೂರು: ಬಿಎಂಡಬ್ಲ್ಯು ಕಾರು ಹೊತ್ತಿ ಉರಿದಿದ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಟೋಲ್ ಪ್ಲಾಜಾ ಬಳಿ ನಡೆದಿದೆ. ಮೈಸೂರು ದಕ್ಷಿಣ ಠಾಣೆ ಪೊಲೀಸರು ಹೇಳುವ ಪ್ರಕಾರ, ಬಿಎಂಡಬ್ಲ್ಯು ಕಾರಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನೋಡ ನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ.
ಟೋಲ್ಗೇಟ್ ಬಳಿ ಕಾರು ಚಾಲಕ ಕಾರನ್ನು ನಿಲ್ಲಿಸಿದಾಗ ಈ ಘಟನೆ ನಡೆದಿದೆ. ಯಾವುದೇ ಅಪಾಯ ಸಂಭವಿಸಿಲ್ಲ. ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ ಎಂದು ತಿಳಿಸಿದ್ದಾರೆ. ಮೈಸೂರಿನ ಕುಟುಂಬವೊಂದು ನಂಜನಗೂಡಿನಿಂದ ವಾಪಸ್ಸಾಗುತ್ತಿದ್ದ ವೇಳೆ ಭಾನುವಾರ ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದೆ. ಇದು ಆಕಸ್ಮಿಕ ಬೆಂಕಿ. ಘಟನೆಯಲ್ಲಿ ವಾಹನ ಜಖಂಗೊಂಡಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿಗೆ ಬೆಂಕಿ ಹೇಗೆ ತಗುಲಿತು? ಎನ್ನುವ ಕುರಿತಾಗಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.