ದೆಹಲಿ :ವಸತಿ ಸಮುಚ್ಚಯದಲ್ಲಿ ಅಗ್ನಿ ದುರಂತ, ಮಕ್ಕಳು ಸೇರಿ ನಾಲ್ವರು ಸಜೀವ ದಹನ

ನವದೆಹಲಿ: ದೆಹಲಿಯ ಶಾಸ್ತ್ರಿ ನಗರದಲ್ಲಿ ಗುರುವಾರ ಮುಂಜಾನೆ ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಮೃತಪಟ್ಟಿದ್ದಾರೆ.

ಗುರುವಾರ ಮುಂಜಾನೆ ಸುಮಾರು ೫.೩೦ರ ಸುಮಾರಿಗೆ ಕಟ್ಟಡದ ಪಾರ್ಕಿಂಗ್ ಏರಿಯಾದಲ್ಲಿ ಕಾಣಿಸಿಕೊಂಡ ಬೆಂಕಿ ಕಟ್ಟಡಕ್ಕೆ ಆವರಿಸಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ ಈ ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಪತಿ- ಪತ್ನಿ ಮೃತಪಟ್ಟಿದ್ದಾರೆ.ಘಟನೆಯಲ್ಲಿ ಮೃತಪಟ್ಟವರನ್ನು ಮನೋಜ್ (30), ಸುಮನ್ (28) ಮತ್ತು ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ‘ಗೀತಾ ಕಾಲೋನಿ ಬಳಿಯ ಶಾಸ್ತ್ರಿನಗರದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ನಮಗೆ ಬೆಳಿಗ್ಗೆ 5:20 ರ ಸುಮಾರಿಗೆ ಕರೆ ಬಂದಿತು. ಕೂಡಲೇ ದೆಹಲಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಕೂಡಲೇ ನಮ್ಮ ತಂಡ ಅವಘಡ ಸಂಭವಿಸಿದ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಕ್ಕೆ ಮುಂದಾದೆವು, ಅಲ್ಲದೆ ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿ ಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿತ್ತು ಸಾಕಷ್ಟು ಪ್ರಯತ್ನದ ಬಳಿಕ ಬೆಂಕಿ ನಂದಿಸಲು ಸಾಧ್ಯವಾಯಿತು ಈ ವೇಳೆ ನಾಲ್ವರು ಮೃತಪಟ್ಟಿದ್ದರು ಎಂದು ಹೇಳಿದ್ದಾರೆ.

Latest Indian news

Popular Stories