ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧ : ಪ್ರಧಾನಿ ಮೋದಿ

ನವದೆಹಲಿ: ದೇಶದ ರೈತರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಕೇಂದ್ರವು ಕಬ್ಬಿನ ಎಂಎಸ್ಪಿಯನ್ನು ಪ್ರತಿ ಕ್ವಿಂಟಾಲ್ 25 ರೂ.ಗಳಿಂದ 340 ರೂ.ಗೆ ಹೆಚ್ಚಿಸಿದ ನಂತರ ಪ್ರಧಾನಿ ಮೋದಿ ಈ ಭರವಸೆ ನೀಡಿದ್ದಾರೆ.

ದೇಶಾದ್ಯಂತದ ನಮ್ಮ ರೈತ ಸಹೋದರ ಸಹೋದರಿಯರ ಕಲ್ಯಾಣಕ್ಕೆ ಸಂಬಂಧಿಸಿದ ಪ್ರತಿಯೊಂದು ನಿರ್ಣಯವನ್ನು ಪೂರೈಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಕಬ್ಬು ಖರೀದಿಯ ಬೆಲೆಯಲ್ಲಿ ಐತಿಹಾಸಿಕ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಈ ಕ್ರಮವು ನಮ್ಮ ಕಬ್ಬು ಉತ್ಪಾದಿಸುವ ಕೋಟ್ಯಂತರ ರೈತರಿಗೆ ಪ್ರಯೋಜನವನ್ನು ನೀಡುತ್ತದೆ” ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Latest Indian news

Popular Stories