ಬಜೆಟ್ ಮಂಡನೆ ವೇಳೆ ಸದನದಿಂದ ಹೊರ ನಡೆದ ಎಸ್ ಪಿ ಸಂಸದರು

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಬಜೆಟ್ ಮಂಡನೆ ಆರಂಭಕ್ಕೂ ಮುನ್ನ ಲೋಕಸಭೆಯಲ್ಲಿ ವಿಪಕ್ಷಗಳು ಗದ್ದಲ-ಕೋಲಾಹಲ ನಡೆಸಿದರು.

ಯಾವುದೇ ಚರ್ಚೆಗೆ ಅವಕಾಶವಿಲ್ಲ ಎಂದು ತಿಳಿಸಿದ ಸ್ಪೀಕರ್, ಬಜೆಟ್ ಮಂಡನೆಗೆ ವಿತ್ತ ಸಚಿವರಿಗೆ ಸೂಚನೆ ನೀಡಿದರು.

ವಿಪಕ್ಷ ಸದಸ್ಯರ ಗದ್ದಲದ ನಡುವೆಯೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಆರಂಭಿಸಿದರು. ಸರ್ಕಾರದ ಯೋಜನೆಗಳ ಬಗ್ಗೆ ವಿವರಿಸಲಾರಂಭಿಸಿದರು.

ಈ ವೇಳೆ ಎಸ್ ಪಿ ಸಂಸದರು ಲೋಕಸಭೆ ಕಲಾಪದಿಂದ ಹೊರ ನಡೆದಿದ್ದಾರೆ ಎಂದು ತಿಳಿದುಬಂದಿದೆ.

Latest Indian news

Popular Stories