ಕೇಜ್ರಿವಾಲ್‌ ಭೇಟಿಗೆ ಪತ್ನಿ ಸುನೀತಾಗೆ ಅನುಮತಿ ನಿರಾಕರಣೆ

ನವದೆಹಲಿ,ಏ.29- ತಿಹಾರ್‌ ಜೈಲಿನಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಭೇಟಿಯಾಗಲು ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಅವರಿಗೆ ಅವಕಾಶ ನಿರಾಕರಿಸಲಾಗಿದೆ. ನಿಗದಿತ ಭೇಟಿಗೆ ಜೈಲು ಅಧಿಕಾರಿಗಳು ಅನುಮತಿ ನಿರಾಕರಿಸಿದ್ದಾರೆ ಎಂದುಆಮ್‌ ಆದ್ಮಿ ಪಕ್ಷ ಆರೋಪಿಸಿದೆ.

ಇಂದು ಮುಖ್ಯಮಂತ್ರಿಯನ್ನು ಭೇಟಿಯಾಗಲಿರುವ ದೆಹಲಿ ಸಚಿವೆ ಅತಿಶಿ ಅವರ ಭೇಟಿಯನ್ನು ತಿಹಾರ್‌ ಜೈಲಿನ ಆಡಳಿತ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ.

ನಾಳೆ ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು ಕೇಜ್ರಿವಾಲ್‌ ಅವರನ್ನು ಭೇಟಿಯಾಗಲು ಆಗಮಿಸುತ್ತಿದ್ದಾರೆ. ಜೈಲಿನಲ್ಲಿರುವ ವ್ಯಕ್ತಿಯನ್ನು ಭೇಟಿಯಾಗಲು ಏಕಕಾಲಕ್ಕೆ ಇಬ್ಬರು ಬರಬಹುದು ಎಂದು ಜೈಲು ನಿಯಮಗಳು ಹೇಳುತ್ತವೆ ಎಂದು ಮೂಲಗಳು ತಿಳಿಸಿವೆ. ಏ.15ರಂದು ಮಾನ್‌ ಅವರು ತಿಹಾರ್‌ಜೈಲಿನಲ್ಲಿ ಕೇಜ್ರಿವಾಲ್‌ ಅವರನ್ನು ಭೇಟಿ ಮಾಡಲು ಹೋದಾಗ, ಎಎಪಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಂದೀಪ್‌ ಪಾಠಕ್‌ ಅವರೊಂದಿಗೆ ಇದ್ದರು.

ಅತಿಶಿ ಮತ್ತು ಭಗವಂತ್‌ ಮಾನ್‌ ಅವರೊಂದಿಗಿನ ಭೇಟಿಯ ನಂತರ, ಕೇಜ್ರಿವಾಲ್‌ ಅವರನ್ನು ಭೇಟಿ ಮಾಡಲು ಸುನೀತಾ ಕೇಜ್ರಿವಾಲ್‌ ಅವರಿಗೆ ಅವಕಾಶ ನೀಡಬಹುದು ಎಂದು ಜೈಲು ಮೂಲಗಳು ತಿಳಿಸಿವೆ.

Latest Indian news

Popular Stories