ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯವಾದಿ ಅಂಬಲಪಾಡಿ ಆನಂದ ಶೆಟ್ಟಿ ನಿಧನ


ಬೆಂಗಳೂರು: 28 ಕರ್ನಾಟಕ ಉಚ್ಚ ನ್ಯಾಯಾಲಯದ ಖ್ಯಾತ ಹಿರಿಯ ನ್ಯಾಯವಾದಿ ಅಂಬಲಪಾಡಿ ಆನಂದ ಶೆಟ್ಟಿಯವರು ಅಲ್ಪಕಾಲದ ಅಸೌಖ್ಯದಿಂದಾಗಿ ದಿನಾಂಕ: 27-01-2023ರಂದು ಬೆಂಗಳೂರಿನ ವಿಜಯನಗರದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಶ್ರೀಯುತರು ಪತ್ನಿ, ಓರ್ವ ಪುತ್ರ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯವಾದಿ ಅಜಿತ್ ಆನಂದ ಶೆಟ್ಟಿ ಹಾಗೂ ಓರ್ವ ಪುತ್ರಿಯನ್ನು ಅಗಲಿರುತ್ತಾರೆ.

ಮೃತರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕಳೆದ 45 ವರ್ಷಗಳಿಂದ ನ್ಯಾಯವಾದಿಯಾಗಿ ಸೇವೆಸಲ್ಲಿಸುತ್ತಾ ಬಂದಿದ್ದು ತಮ್ಮ ವೃತ್ತಿ ಜೀವನದಲ್ಲಿ ಅಪಾರ ಖ್ಯಾತಿಗಳಿಸಿದ್ದರು. ಬಡ ಕಕ್ಷಿಗಾರರುಗಳಿಗೆ ಉಚಿತವಾಗಿ ಕಾನೂನಿನ ನೆರವು ನೀಡುತ್ತಿದ್ದ ಶ್ರೀಯುತರು ಅಪಾರ ಸಂಖ್ಯೆಯ ಕಕ್ಷಿಗಾರರನ್ನೂ, ಬಂಧು ಮಿತ್ರರನ್ನೂ ಅಗಲಿರುತ್ತಾರೆ.

Latest Indian news

Popular Stories