ಕುಂದಾಪುರ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ಮನೆಯ ಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಲ್ವಾಡಿ ಗ್ರಾಮದ ಸೌಕೂರು ಕುದ್ರು ಎಂಬಲ್ಲಿ ನಡೆದಿದೆ.
ಮೃತ ರನ್ನು ಸೌಕೂರು ಕುದ್ರು ನಿವಾಸಿ ರಾಜು ಮೊಗವೀರ ಅವರ ಮಗ ಸೂರಜ್ ಎಂದು ಗುರುತಿಸಲಾಗಿದೆ . ಈತ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಯಾರ ಮಾತನ್ನು ಕೇಳದೇ ತನ್ನಷ್ಟಕ್ಕೆ ಇರುತ್ತಿದ್ದನು. ಸಣ್ಣ ಸಣ್ಣ ವಿಷಯಕ್ಕೆ ಕೋಪ ಮಾಡಿಕೊಂಡು ತನ್ನ ರೂಮ್ನ ಕೋಣೆಗೆ ಹೋಗಿ ಬಾಗಿಲ ಚಿಲಕ ಹಾಕಿಕೊಂಡು ಕೂರುತ್ತಿದ್ದು, ಸ್ವಲ್ಪ ಸಮಯದ ನಂತರ ಹೊರಕ್ಕೆ ಬರುತ್ತಿದ್ದನು. ಅದೇ ರೀತಿ ನಿನ್ನೆ ಕೂಡ ಸೂರಜ್ ಮನೆಯ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದು, ಮನೆಯವರು ಎಷ್ಟೇ ಬಾಗಿಲು ಬಡಿದರೂ ಬಾಗಿಲು ತೆಗೆಯಲಿಲ್ಲ. ಬಳಿಕ ಕಿಟಕಿಯಲ್ಲಿ ನೋಡಿದಾಗ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.