ರಾಯಚೂರು, ಜೂ.೨೫, (ಕ.ವಾ):- ಜಿಲ್ಲೆಯ ಮಸ್ಕಿ ತಾಲೂಕಿನ ತುರುವಿಹಾಳ ಪೊಲೀಸ್ ಠಾಣೆಯ ವ್ಯಾಪ್ತಿಯ ಕಲಮಾಗಿ ಗ್ರಾಮದ ಶಿವಪ್ಪ (೫೫ ವರ್ಷ) ತಂದೆ ಪಂಪಣ್ಣ ಎಂಬುವವರು ಕಾಣೆಯಾಗಿದ್ದಾರೆ.
ಕಾಣೆಯಾದ ವ್ಯಕ್ತಿಯು ಒಕ್ಕಲತನ ಮಾಡುತ್ತಿದ್ದು, ವ್ಯಕ್ತಿ ಬಗ್ಗೆ ಸುಳಿವು ಸಿಕ್ಕಲ್ಲಿ ತುರುವಿಹಾಳ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಠಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೃದ್ಧ ಕಾಣೆ:
ಜಿಲ್ಲೆಯ ಮಸ್ಕಿ ತಾಲೂಕಿನ ತುರುವಿಹಾಳ ಪೊಲೀಸ್ ಠಾಣೆಯ ವ್ಯಾಪ್ತಿಯ ಸಾತ್ ಮೈಲ್ ಕ್ಯಾಂಪಿನ ಎಮ್. ಸತ್ಯನಾರಾಯಣ (೬೯ ವರ್ಷ) ತಂದೆ ಬೆಟ್ಟಪ್ಪ ಎಂಬ ವೃದ್ಧ ಕಾಣೆಯಾಗಿದ್ದಾರೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ತುರುವಿಹಾಳ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವನಕ ಪತ್ತೆಗೆ ಮನವಿ:
ಜಿಲ್ಲೆಯ ಮಸ್ಕಿ ತಾಲೂಕಿನ ತುರುವಿಹಾಳ ಪೊಲೀಸ್ ಠಾಣೆಯ ವ್ಯಾಪ್ತಿಯ ಕೇದರ (೨೬ ವರ್ಷ) ತಂದೆ ಬಸವರಾಜ ಎಂಬ ಯುವಕ ಕಾಣೆಯಾಗಿದ್ದಾರೆ.
ಕಾಣೆಯಾದ ಯುವಕನ ಬಗ್ಗೆ ಸುಳಿವು ಸಿಕ್ಕಲ್ಲಿ ತುರುವಿಹಾಳ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಠಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.