ರಾಯಚೂರಿನಲ್ಲಿ ಲಾರಿ ಪಲ್ಟಿಯಾಗಿ ಘೋರ ದುರಂತ : ಮೂವರು ‘PWD’ ಅಧಿಕಾರಿಗಳು ಸಾವು

ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಪಲ್ಟಿಯಾಗಿ ಮೂವರು ಅಧಿಕಾರಿಗಳು ಸಾವನ್ನಪ್ಪಿದ್ದಾರೆ.

ರಾಯಚೂರಿನ ಸಿಂಧನೂರು ಸಮೀಪದ ಡಾಲರ್ಸ್ ಕಾಲೋನಿ ಬಳಿ ಈ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಅಧಿಕಾರಿಗಳ ಮೇಲೆ ಲಾರಿ ಪಲ್ಟಿಯಾಗಿದೆ.

ಲಾರಿ ಪಲ್ಟಿಯಾಗಿ ಮಲ್ಲಿಕಾರ್ಜುನ (29), ಶಿವರಾಜು (28) , ಮೆಹಬೂಬ (30) ಎಂಬುವವರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ

Latest Indian news

Popular Stories