ರಾಯಚೂರಿನಲ್ಲಿ ಬಿಸಿಲಿನ ತಾಪಕ್ಕೆ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ರಾಯಚೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಳವಾಗುತ್ತಿದ್ದು, ಒಂದೇ ಕುಟುಂಬದ ಇಬ್ಬರು ಮಕ್ಕಳು ಬಿಸಿಲಿನ ತಾಪಕ್ಕೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಚಿಕ್ಕಸುಗೂರು ಗ್ರಾಮದಲ್ಲಿ ಬಿಸಿಲಿನ ತಾಪಕ್ಕೆ ಒಂದೇ ತಾಯಿಯ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.ಇಬ್ಬರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಮಕ್ಕಳನ್ನು ಆರತಿ (9), ಪ್ರಿಯಾಂಕ್ (7) ಎಂದು ಗುರುತಿಸಲಾಗಿದೆ. ಹುಸೇನಮ್ಮ-ಮಾರುತಿ ದಂಪತಿಯ ಮಕ್ಕಳಾಗಿದ್ದು, ಮಾರುತಿಯ ತಂದೆ ಹಾಗೂ ಮತ್ತೊಬ್ಬ ಮಗು ಅಸ್ವಸ್ಥರಾಗಿದ್ದು, ಅಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Latest Indian news

Popular Stories