ಕಾಂಗ್ರೆಸ್ ಸರ್ಕಾರದ ‘ಯುವನಿಧಿ’ ಯೋಜನೇ ಮುಂದುವರೆಯುವುದೇ ಅನುಮಾನವಾಗಿದೆ : ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ : ಯುವನಿಧಿ ಕಾರ್ಯಕ್ರಮಕ್ಕೆ ಸಂಸದ ಬಿ ವೈ ರಾಘವೇಂದ್ರ ಕಿಡಿಕಾರಿದ್ದು ಇನ್ನೆರಡು ತಿಂಗಳಲ್ಲಿ ಲೋಕಸಭೆ ಚುನಾವಣೆ ಇದೆ.ತರಾತುರಿಯಲ್ಲಿ ಯುವನಿಧಿ ಚಾಲನೆ ನೀಡಿದ್ದಾರೆ ಯುವನಿಧಿ ಯೋಜನೆಯ ಮುಂದುವರೆಯುವುದು ಅನುಮಾನವಾಗಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಶಿವಮೊಗ್ಗದಲ್ಲಿ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮರಳು ಮಾಡಲು ಹೊರಟಿದೆ. ಗ್ಯಾರೆಂಟಿಗೆ ಶರತ್ತು ಹಾಕಿ ಸಂಖ್ಯೆ ಕಡಿಮೆ ಮಾಡುತ್ತಿದೆ.ಸರ್ಕಾರ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತಿದೆ.ಚುನಾವಣೆಯ ಬಳಿಕ ಮುಂದುವರೆಯುವುದು ಅನುಮಾನವಾಗಿದೆ ಈ ಗ್ಯಾರಂಟಿ ಮುಂದುವರಿಯುವ ವಿಶ್ವಾಸವೇ ಇಲ್ಲದಂತಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ ಶಿವಮೊಗ್ಗದಲ್ಲಿ ಸಂಸದ ಬಿ ವೈ ರಾಘವೇಂದ್ರ ವಾಗ್ದಾಳಿ ನಡೆಸಿದರು.ಯುವಜನರ ಕಣ್ಣಿಗೆ ಮಣ್ಣೆತ್ತಿಸುವ ಕೆಲಸ ಮಾಡಿದೆ ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವ ಭರವಸೆ ನೀಡಿದೆ.ಆದರೆ ಈ ಯೋಜನೆಯಲ್ಲಿ ಫಲಾನುಭವಿಗಳನ್ನು ಪಡೆಯಲು ಮಾನದಂಡಗಳನ್ನು ಹಾಕಲಾಗಿದ್ದು ಯುವಕರು ಮತ್ತು ಮತದಾರರಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡಿದೆ ಎಲ್ಲರ ನಿರೀಕ್ಷೆ ಸುಳ್ಳಾಗಿದೆ ಎಂದು ತಿಳಿಸಿದರು.

Latest Indian news

Popular Stories