ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪಷ್ಟನೆ

ಶಿವಮೊಗ್ಗ : ಮುಂದಿನ 2024ರಲ್ಲಿ ನಡೆಯುವಂತಹ ಲೋಕಸಭೆ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ರಾಜಕೀಯದಿಂದ ನಾನು ನಿವೃತ್ತಿ ಪಡೆದಿದ್ದೇನೆ.ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ.ಪಕ್ಷದ ವರಿಷ್ಠರ ಸೂಚನೆಯಂತೆ ನಾನು ನಡೆದುಕೊಂಡಿದ್ದೇನೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದರು.

ಶಾಸಕ ಯತ್ನಾಳ ಅಪಟ್ಟ ಹಿಂದುತ್ವವಾದಿ ಅದರಲ್ಲಿ ಎರಡು ಮಾತಿಲ್ಲ.ವಿಜಯಪುರ ಶಾಸಕ ಯತ್ನಾಳಗೆ ಅಸಮಾಧಾನ ಇರುವುದು ನಿಜ.ನಮ್ಮ ಪಕ್ಷದ ಹಿರಿಯ ನಾಯಕರು ಅಸಮಾಧಾನವನ್ನು ಸರಿಪಡಿಸುತ್ತಾರೆ ಎಂದು ಅವರು ತಿಳಿಸಿದರು.

Latest Indian news

Popular Stories