ಪ್ರತಾಪ್ ಸಿಂಹ ಅವರೇ ನೀವು ಪತ್ರಕರ್ತರಾಗಿದ್ದಾಗ ಸ್ವಲ್ಪ ಓದುತ್ತಿದ್ರಿ. ಸಂಸದರಾದ ಮೇಲೆ ಓದೋದು ಬಿಟ್ಟಿದ್ದೀರಿ. ನಿಮಗೆ ತಾಕತ್ ಇದ್ದರೆ ಎಫ್ಸಿಐ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ. ವೈಯಕ್ತಿಕ ವರ್ಚಸ್ಸಿನಿಂದ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಆಗುತ್ತೇನ್ರಿ ಎಂದು ಶಾಸಕ ಪ್ರದೀಪ್ ಈಶ್ವರ್ ಪ್ರಶ್ನಿಸಿದ್ದಾರೆ.
ಸೋಲಿನ ಭೀತಿಯಿಂದ ಪ್ರತಾಪ್ ಸಿಂಹ ಏನೇನೋ ಮಾತನಾಡುತ್ತಾರೆ. ಸಂಸದ ಪ್ರತಾಪ್ ಸಿಂಹ ಬಾಯಿ ಮುಚ್ಚಿಕೊಂಡು ಇರಬೇಕು ಅಷ್ಟೇ ಎಂದು ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಬಗ್ಗೆ ವೈಯಕ್ತಿಕ ಹೇಳಿಕೆ ಕೊಡ್ತಿದ್ದಾರೆ. ವಿಷಯಾಧಾರಿತ ಬಿಟ್ಟು ವೈಯಕ್ತಿಕ ವಿಚಾರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.