ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ: ಹಾನಗಲ್- ಶಿವರಾಜ ಸಜ್ಜನರ್, ಸಿಂಧಗಿಗೆ ರಮೇಶ್ ಭೂಸನೂರ್ ಅಭ್ಯರ್ಥಿ

ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ವಿಧಾನಸಭೆ‌ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಹಾನಗಲ್‌ನಲ್ಲಿ ವಿಧಾನ ಪರಿಷತ್‌ನ ಮಾಜಿ ಸದಸ್ಯ ಶಿವರಾಜ ಸಜ್ಜನರ್ ಅವರನ್ನು ಹಾಗೂ ಸಿಂದಗಿಯಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ಸಿಂದಗಿ ಕ್ಷೇತ್ರಕ್ಕೆ ರಮೇಶ ಭೂಸನೂರ ಅವರಿಗೆ‌ ನಿರೀಕ್ಷೆಯಂತೆ‌ ಟಿಕೆಟ್ ನೀಡಲಾಗಿದೆ. ಹಾನಗಲ್ ನಲ್ಲಿ ಸಂಸದ ಶಿವಕುಮಾರ ಉದಾಸಿ ಅವರ ಪತ್ನಿ ರೇವತಿ ಅವರಿಗೆ ಟಿಕೆಟ್ ನೀಡಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ.

ಈ ಎರಡೂ ಕ್ಷೇತ್ರದ ಉಪಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಹಾನಗಲ್ ಕ್ಷೇತ್ರವನ್ನು ಉಳಿಸಿಕೊಳ್ಳುವುದು ಬಿಜೆಪಿ ಪಾಲಿಗೆ ಪ್ರತಿಷ್ಠೆಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯಾಗಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರದ ಚುನಾವಣೆ ಮಹತ್ವ ಪಡೆದುಕೊಂಡಿದೆ.

Latest Indian news

Popular Stories