ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯದ ಪೋಸ್ಟ್ – ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ FIR

ತುಮಕೂರು: ಸಾಮಾಜಿಕ ಜಾಲತಾಣದಲ್ಲಿ (Social Media) ಕೋಮು ವೈಷಮ್ಯದ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ (Shakunthala Nataraj) ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಶಕುಂತಲಾ, ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಅಲ್ಲಾ ಸಹಾಯಕ್ಕೆ ಬರಲಿಲ್ಲ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗುತ್ತಾರೆ ಎಂದು ಅನ್ಯ ಧರ್ಮದ ವಿರುದ್ಧ ಅವಹೇಳನ ಮಾಡಿದ್ದಾರೆ ಎಂದು ದೂರಲಾಗಿದೆ.
ಪೋಸ್ಟ್ ಹಾಕಿದ ಹಿನ್ನೆಲೆ ಪೊಲೀಸ್ ಕಾನ್ಸ್ಟೇಬಲ್ ಉಮಾಶಂಕರ್ ದೂರು ನೀಡಿದ್ದಾರೆ. ಅದರಂತೆ ಕಲಂ 299 ಬಿಎನ್ಎಸ್ ಅಡಿ ಎಫ್ಐಆರ್ ದಾಖಲಾಗಿದೆ. ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.
ತಮ್ಮ ವಿರುದ್ಧ ಎಫ್ಐಆರ್ ದಾಖಲಾಗಿರೋದನ್ನು ಖಂಡಿಸಿ ಶಕುಂತಲಾ ಮತ್ತೆ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಬಸನಗೌಡ ಯತ್ನಾಳ್, ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಭಯ ನೀಡಿದ್ದಾರೆ.