ಮಣಿಪಾಲ: ಮನೆಯಂಗಳದಲ್ಲಿ ಜಾರಿ ಬಿದ್ದು ವ್ಯಕ್ತಿ ಮೃತ್ಯು

ಮಣಿಪಾಲ, ಜು.1: ಮನೆ ಅಂಗಳದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟ ಘಟನೆ ಜು.1ರಂದು ಬೆಳಗ್ಗೆ 7.45ರ ಸುಮಾರಿಗೆ ನಡೆದಿದೆ.

ಮೃತರನ್ನು ಕೆ.ಎಸ್.ರಮೇಶ್(62) ಎಂದು ಗುರುತಿಸಲಾಗಿದೆ. ಇವರು ಮನೆಯ ಎದುರುಗಡೆ ಇರುವ ತೆಂಗಿನ ಮರದಿಂದ ಬಿದ್ದಿದ್ದ ತೆಂಗಿನ ಕಾಯಿ ಹೆಕ್ಕಲು ಮನೆಯ ಅಂಗಳದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Latest Indian news

Popular Stories