ಉಡುಪಿ | ಮನೆ ಕಳವು ಪ್ರಕರಣ: ಆರೋಪಿಗೆ ಕಠಿಣ ಜೈಲು ಶಿಕ್ಷೆ

ಉಡುಪಿ, ಫೆಬ್ರವರಿ 06 : ನಗದು ಹಾಗೂ ಚಿನ್ನಾಭರಣಗಳನ್ನು ಕಳವು ಮಾಡಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2021 ನವೆಂಬರ್ 17 ರಂದು ರಾತ್ರಿ ಸುಖೇಶ್ ನಾಯ್ಕ್ ಎಂಬಾತನು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಗುಂಡಿಬೈಲು ದುಗ್ಗಣ್ಣ ಬೆಟ್ಟು, ಮಾರ್ಗ ಜುಮಾದಿಕಟ್ಟೆ ದೇವಸ್ಥಾನದ ಹಿಂಬದಿ ರಸ್ತೆಯಲ್ಲಿರುವ ಬಾಬು ಆಚಾರ್ಯ ಅವರ ಮನೆಯ ಬೀಗ ಮುರಿದು, ಒಳಗೆ ಪ್ರವೇಶಿಸಿ, ಕಪಾಟಿನ ಲಾಕರ್‌ನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯದ ನ್ಯಾಯಾಧೀಶೆ ಶಕುಂತಲಾ ಅವರು ಆರೋಪಿ ಸುಖೇಶ್ ನಾಯ್ಕ್ ಎಂಬಾತನಿಗೆ ಭಾ.ದಂ.ಸA. ಕಲಂ 380 ರಡಿ 5 ವರ್ಷ ಮತ್ತು ಕಲಂ 457 ರಡಿ 5 ವರ್ಷಗಳ ಕಾಲ ಕಠಿಣ ಸಜೆ ಹಾಗೂ 5000 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ.
ಸರಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಂತಿ ವಾದ ಮಂಡಿಸಿರುತ್ತಾರೆ.

Latest Indian news

Popular Stories