ಕುಂದಾಪುರ: ಸ್ನಾತಕೋತ್ತರ ಪದವಿ ಮುಗಿದರೂ ಕೆಲಸ ಸಿಗದಕ್ಕೆ ಬೆಸೆತ್ತು ಯುವತಿ ಆತ್ಮಹತ್ಯೆ

ಕುಂದಾಪುರ, ಮೇ 29: ಸ್ನಾತಕೋತ್ತರ ಪದವಿ ಮುಗಿದರೂ ಕೆಲಸ ಸಿಗದ ಕಾರಣ ಖಿನ್ನತೆಗೆ ಒಳಗಾಗಿದ್ದ ಯುವತಿಯೊಬ್ಬಳು ಮೇ 27ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮೃತರನ್ನು ಕಲ್ತೋಡು ಗ್ರಾಮದ ಸೀಗೇಡಿ ನಿವಾಸಿ ಪ್ರಮೋದ ಶೆಟ್ಟಿ ಎಂಬವರ ಪುತ್ರಿ ಗೌತಮಿ (22) ಎಂದು ಗುರುತಿಸಲಾಗಿದೆ.

ಗೌತಮಿ ಉಡುಪಿಯ ಖಾಸಗಿ ಕಾಲೇಜಿನಲ್ಲಿ ಎಂಕಾಂ ಮಾಡಿದ್ದಾರೆ. ಆಕೆ ಬ್ಯಾಂಕ್ ನೇಮಕಾತಿ ಪರೀಕ್ಷೆ ಹಾಗೂ ಇತರೆ ಕಂಪನಿ ನೇಮಕಾತಿಗೆ ಬರೆದಿದ್ದರೂ ಪ್ಲೇಸ್ ಮೆಂಟ್ ಸಿಕ್ಕಿರಲಿಲ್ಲ.

ಗೌತಮಿ ತನ್ನ ಕುಟುಂಬ ಸದಸ್ಯರೊಂದಿಗೆ ತನ್ನ ಹತಾಶೆಯನ್ನು ವ್ಯಕ್ತಪಡಿಸಲು ಸಾಧ್ಯವಾಗಲಿಲ್ಲ. ಡೆತ್ ನೋಟ್ ಬರೆದಿಟ್ಟು ಮನೆಯ ಮೊದಲ ಮಹಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಆಕೆಯನ್ನು ನೇಣಿನ ಕುಣಿಕೆ ತೆಗೆದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದರೂ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದರು.

ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ರೀತಿಯ ತೊಂದರೆಗೆ ಒಳಗಾಗಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯವನ್ನು ಪಡೆಯಿರಿ. ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 9152987821.

Latest Indian news

Popular Stories