ಬೆಂಗಳೂರು: “ಮಾಜಿ ಸಿಎಂ ಬೊಮ್ಮಾಯಿ ಸೇರಿದಂತೆ
ರಾಜ್ಯ ಬಿಜೆಪಿ ನಾಯಕರು, ಉಡುಪಿ ಪ್ರಕರಣದಲ್ಲಿ ಇಲಿ ಹೋಗಿದನ್ನೇ ಹುಲಿ ಹೋದಂತೆ ಬಿಂಬಿಸುತ್ತಿದ್ದಾರೆ. ಉಡುಪಿ ಪ್ರಕರಣದಲ್ಲಿ ಇಷ್ಟು ಬಟ್ಟೆ ಹರಿದುಕೊಳ್ಳುತ್ತಿರುವ ನೀವು, ಪ್ರತೀಕ್ ಗೌಡ ಎಂಬ ತೀರ್ಥಹಳ್ಳಿಯ ABVP ಘಟಕದ ಅಧ್ಯಕ್ಷ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ
ಎಲ್ಲಿದ್ದಿರೀ?” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.
“ಪ್ರತೀಕ್ ಗೌಡ ಎಂಬ ABVPಯವನೊಬ್ಬ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟಾಗ ಬೊಮ್ಮಾಯಿ ಸೇರಿದಂತೆ BJPಯ ಎಲ್ಲಾ ನಾಯಕರ ನವರಂದ್ರಗಳೂ ಬಂದ್ ಆಗಿತ್ತು. ಈಗ ಧರ್ಮರಕ್ಷಕರ ಮುಖವಾಡ ತೊಟ್ಟು ಅಖಾಡಕ್ಕಿಳಿದಿದ್ದಾರೆ. ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ ‘ಪ್ರತೀಕ್’ ನ ಸ್ಥಾನದಲ್ಲಿ ‘ಅತೀಕ್’ ಇದ್ದರೆ ಮಾತ್ರ ಇವರ ಹೋರಾಟವೇ?” ಎಂದು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
“ಬೊಮ್ಮಾಯಿಯವರೇ, ಪೊಲೀಸರು ನಿಮ್ಮ ಆಡಳಿತದಲ್ಲಿ ರಾಜಕೀಯದ ಒತ್ತಡಕ್ಕೆ ಮಣಿದಿರಬಹುದು. ಆದರೆ ನಾವು ಪೋಲಿಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಹರಿಬಿಟ್ಟ ಪ್ರತೀಕ್
ಗೌಡ ಎಂಬಾತನನ್ನು ನಮ್ಮ ಪೊಲೀಸರು ಒದ್ದು ಒಳಗಾಕ್ಕಿದ್ದಾರೆ. ಬಹುಶಃ ಧರ್ಮ ರಕ್ಷಣೆಯ ಗ್ರಾಫ್ ನಿಮಗಿಂತ ನಮ್ಮದ್ದೇ ಜಾಸ್ತಿ ಇದೆಯಲ್ಲವೇ?’
ಎಂದು ದಿನೇಶ್ ಗುಂಡೂರಾವ್ ಟ್ವಿಟ್ ಮಾಡಿದ್ದಾರೆ.