ಕಾರ್ಕಳ, ಸೆ.3: ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿ ಆ.30ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳ ನಿವಾಸಿ ಸಂತೋಷ್ ಟಿ(32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮನೆಯ ಮಲಗುವ ಕೋಣೆಯಲ್ಲಿದ್ದ ಗೋದ್ರೇಜ್ ಲಾಕರ್ನಿಂದ 10.05 ಲಕ್ಷ ಮೌಲ್ಯದ 33 ಪವನ್ ಚಿನ್ನಾಭರಣಗಳನ್ನು ಕಳವು ಮಾಡಲಾಗಿತ್ತು. ಹೊರಗಿನ ಪೆಟ್ಟಿಗೆಯಲ್ಲಿಟ್ಟಿದ್ದ ಕೀಲಿಯನ್ನು ಬಳಸಿ ಕಳ್ಳನು ಮನೆಗೆ ಪ್ರವೇಶಿಸಿದನು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆರೋಪಿಯನ್ನು ಬಂಧಿಸಲು ಪಿಎಸ್ಐ ದಿಲೀಪ, ಪಿಎಸ್ಐ ಸುಂದರ, ಪಿಸಿಗಳಾದ ಮಹಾಂತೇಶ, ಪ್ರಶಾಂತ್ ಕೆ, ಶಶಿಕುಮಾರ್, ನಾಗರಾಜ, ಗೋವಿಂದ ಆಚಾರಿ, ರಾಘವೇಂದ್ರ, ಅಶೋಕ್ ಅವರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.
ಸೆಪ್ಟೆಂಬರ್ 1 ರಂದು ಆರೋಪಿ ಸಂತೋಷ್ ಎಂಬಾತನನ್ನು ಬಂಧಿಸಿದ ತಂಡವು ದ್ವಿಚಕ್ರವಾಹನವನ್ನು ಜಪ್ತಿ ಮಾಡುವುದರೊಂದಿಗೆ ಕಳವು ಮಾಡಿದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡರು.