ಉಡುಪಿ: ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ಏಳು ಮಂದಿ ಬಾಂಗ್ಲಾದೇಶ ಪ್ರಜೆಗಳ ಬಂಧನದ ನಂತರ ಇದೀಗ ಕಾರ್ಕಳದಿಂದ ಮತ್ತಿಬ್ಬರು ಅಕ್ರಮ ವಲಸಿಗರನ್ನು ಬಂಧಿಸಿರು ಕುರಿತು ಉಡುಪಿ ಎಸ್ಪಿ ಡಾ.ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕಾರ್ಕಳದಿಂದ ಮತ್ತಿಬ್ಬರು ಅಕ್ರಮ ವಲಸಿಗರನ್ನು ವಶಕ್ಕೆ ಪಡೆದಿದ್ದೇವೆ. ಹೆಚ್ಚಿನ ವಿಚಾರಣೆ ಬಳಿಕ ಬಂಧನ ಪ್ರಕ್ರಿಯೆ ನಡೆಯಲಿದೆ.ಇಂದು ಎರಡು ಸ್ಥಳಗಳಲ್ಲಿ ಮಹಜರ್ ಪ್ರಕ್ರಿಯೆ ಮಾಡಲಾಗಿದೆ ಎಂದು ಹೇಳಿದ್ದಾರೆ.