ಕುಂದಾಪುರ: ಬಿ.ಕಾಂ ಪದವೀಧರ ಆತ್ಮಹತ್ಯೆ

ಕುಂದಾಪುರ: ಬಿ.ಕಾಂ ಪದವೀಧರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉಡುಪಿ ಕೃಷ್ಣರಾಜ (31) ಇವರು ಬಿ.ಕಾಂ ವ್ಯಾಸಂಗ ಮುಗಿಸಿ ಬೆಂಗಳೂರಿನಲ್ಲಿ ಖಾಸಗೀ ಕಂಪೆನಿಯಲ್ಲಿ ಉದ್ಯೋಗ ಮಾಡಿಕೊಂಡಿದ್ದರು.

ಕಳೆದ 6 ತಿಂಗಳಿಂದ ಕೆಲಸವಿಲ್ಲದೇ ಊರಿಗೆ ಬಂದಿದ್ದು ಇತ್ತೀಚೆಗೆ ಸುಮಾರು 3 ತಿಂಗಳಿಂದ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆ ಯುಡಿಆರ್‌ ಕ್ರಮಾಂಕ 33/2024 ಕಲಂ:194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.

Latest Indian news

Popular Stories