ಕುಂದಾಪುರ | ಮೊಬೈಲ್ ಸಂದೇಶ ಕಳುಹಿಸಿ ನಾಪತ್ತೆ

ಕುಂದಾಪುರ: ವಡೇರಹೋಬಳಿ ಗ್ರಾಮದ ಬಿಸಿ ರಸ್ತೆಯ ಕಾಂತರಬೆಟ್ಟು ನಿವಾಸಿ ಜಯೇಂದ್ರ(26) ಎಂಬವರು ಜೂ.23ರಂದು ಧರ್ಮಸ್ಥಳ ಸಂಘದ ಹಣ ಕಟ್ಟಿಬರುವುದಾಗಿ ಮನೆಯಿಂದ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ.

ಬಳಿಕ ಜಯೇಂದ್ರ, ತನ್ನ ಸಂಬಂಧಿಕರೊಬ್ಬರಿಗೆ ಮೊಬೈಲ್ ಮೆಸೇಜ್ ಕಳುಹಿಸಿ, ನಾನು ಮನೆ ಬಿಟ್ಟು ಹೋಗುತ್ತಿದ್ದೇನೆ, ಯಾರು ಕೂಡ ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ತಿಳಿಸಿದ್ದಾನೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Latest Indian news

Popular Stories