ಕುಂದಾಪುರ: ವಿವಾಹಿತ ಯುವತಿ ಕುಸಿದು ಬಿದ್ದು ಮೃತ್ಯು

ಶಂಕರನಾರಾಯಣ: ವಿವಾಹಿತ‌ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಹೆಂಗವಳ್ಳಿ ಗ್ರಾಮದ ಸವಿತಾ (35) ಎಂದು ಗುರುತಿಸಲಾಗಿದೆ. ಮದುವೆಯಾಗಿ 2 ಮಕ್ಕಳಿದ್ದು ಅವರು ಮನೆಯಲ್ಲಿಯೇ ಗೇರು ಬೀಜವನ್ನು ತಂದು ಗೇರುಬೀಜ ಸುಲಿಯುವ ಕೆಲಸವನ್ನು ಮಾಡಿಕೊಂಡಿದ್ದರು. ಎಪ್ರಿಲ್ 8 ರಂದು ಬೆಳಿಗ್ಗೆ 8 ಗಂಟೆಗೆ ಸವಿತಾ ರವರು ತನಗೆ ಎದೆ ಉರಿಯುತ್ತಿದೆ ಎಂದು ಹೇಳಿ ಕುಸಿದು ಬಿದ್ದಾಗ ರಿಕ್ಷಾದಲ್ಲಿ ಹಾಲಡಿಯ ದುರ್ಗಾ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ಪರೀಕ್ಷಿಸಿದ ವೈದ್ಯಾಧಿಕಾರಿಗಳು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಣಿಪಾಲಕ್ಕೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದು ಒಂದು ಅಂಬುಲೆನ್ಸ್ ವಾಹನದಲ್ಲಿ ಮಣಿಪಾಲಕ್ಕೆ ಕರೆದುಕೊಂಡು ಹೋದಲ್ಲಿ ಪರೀಕ್ಷಿಸಿದ ವೈದ್ಯಾಧಿಕಾರಿಗಳು ಆಸ್ಪತ್ರೆಗೆ ಬರುವಾಗಲೆ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣಾ ಯು.ಡಿ.ಆರ್‌ ಕ್ರಮಾಂಕ 19/2024 ಕಲಂ: 174 ಸಿ.ಆರ್.ಪಿ.ಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Latest Indian news

Popular Stories