ಮಲ್ಪೆ: ಮುಳುಗುತ್ತಿದ್ದ ಬಾಲಕನ ರಕ್ಷಣೆ

ಉಡುಪಿ: ನೀರಿನಲ್ಲಿ ಮುಳುಗುತ್ತಿದ್ದ ಚಿಕ್ಕಬಳ್ಳಾಪುರ ಮೂಲದ 12 ವರ್ಷದ ಬಾಲಕನನ್ನು ರಕ್ಷಣೆ ಮಾಡಲಾಗಿದೆ. ಮಲ್ಪೆ ಸಮುದ್ರ ಪ್ರದೇಶದಲ್ಲಿರುವ ವಡಬಾಂಡೇಶ್ವರ ಬೀಚ್ ನಲ್ಲಿ ಬಾಲಕ ಮುಳುಗುತ್ತಿದ್ದ.

ಬಾಲಕ ಶ್ರೇಯಸ್ ಮುಳುಗುತ್ತ ಸಹಾಯಕ್ಕಾಗಿ ಕೂಗುತ್ತಿದ್ದದ್ದನ್ನು ಗಮನಿಸಿದ ಲೈಫ್ ಗಾರ್ಡ್ ಗಳು ಆತನನ್ನು ರಕ್ಷಣೆ ಮಾಡಿದ್ದಾರೆ.

ಜೆಟ್ ಸ್ಕೀ ವಾಹನದ ಮೂಲಕ ಮುಳುಗುತ್ತಿದ್ದ ಅವರನ್ನು ರಕ್ಷಿಸಿದರು. ನಂತರ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆತ ಬಳಲಿಕೆಯಿಂದ ಬಳಲುತ್ತಿದ್ದ ಮತ್ತು ಕೆಲವೇ ಗಂಟೆಗಳಲ್ಲಿ ಅವನನ್ನು ಬಿಡುಗಡೆ ಮಾಡಲಾಯಿತು.

ಬಾಲಕನ ಕುಟುಂಬ ತಮ್ಮ ಊರಿಗೆ ತೆರಳಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೀವರಕ್ಷಕರ ಪ್ರಕಾರ, ಜಿಲ್ಲಾಡಳಿತ ಮತ್ತು ಪೊಲೀಸರು ಎಚ್ಚರಿಕೆ ಫಲಕಗಳನ್ನು ಹಾಕಿದ್ದರೂ, ಪ್ರವಾಸಿಗರು ಸಮುದ್ರಕ್ಕೆ ಇಳಿದು ಅಲೆಗಳಿಗೆ ಸಿಲುಕುತ್ತಾರೆ.

Latest Indian news

Popular Stories