ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ತೀವ್ರ ರಕ್ತದ ಕೊರತೆ: ರಕ್ತದಾನ ಮಾಡಿ ಜೀವ ಉಳಿಸಿ

ಮಣಿಪಾಲ , 25 ಏಪ್ರಿಲ್ 2024: ಮಹತ್ವದ ಪ್ರಕಟಣೆಯಲ್ಲಿ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಹೆಚ್ಚಿನ ಯಾವುದೇ ರಕ್ತ ದಾನ ಶಿಬಿರ ನಡೆಯುತ್ತಿಲ್ಲ. ಆದ್ದರಿಂದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರಕ್ತದ ತೀವ್ರ ಕೊರತೆಯಿಂದ ಕೆಲವೊಂದು ಕಾಯಿಲೆಗಳಿಗೆ ಮತ್ತು ಅಪಘಾತ ಸಂದರ್ಭದಲ್ಲಿ ತುರ್ತು ಶಸ್ತ್ರಚಿಕಿತ್ಸೆಗಳನ್ನು ಮುಂದೂಡುವ ಪ್ರಮೇಯ ತಲೆದೂರಿದೆ . ಆದ್ದರಿಂದ ಈ ಬಿಕ್ಕಟ್ಟನ್ನು ನಿವಾರಿಸಲು ಮತ್ತು ಜೀವ ಉಳಿಸಲು ಸಾರ್ವಜನಿಕರು ರಕ್ತದಾನ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ನಿಮ್ಮ ಕೊಡುಗೆ ಗಮನಾರ್ಹ ವ್ಯತ್ಯಾಸವನ್ನು ಮಾಡಬಹುದು. ದಯವಿಟ್ಟು ರಕ್ತದಾನ ಮಾಡಿ ಮತ್ತು ಈ ತುರ್ತು ಅಗತ್ಯದ ಸಮಯದಲ್ಲಿ ನಮ್ಮ ಸಮುದಾಯಕ್ಕೆ ಸೇವೆ ಸಲ್ಲಿಸಲು ನಮಗೆ ಸಹಾಯ ಮಾಡಿ. ರಕ್ತ ನಿಧಿಯಲ್ಲಿ ಬೆಳೆಗ್ಗೆ ಗಂಟೆ 7:00 ರಿಂದ ರಾತ್ರಿ ಗಂಟೆ 7:00 ರವರೆಗೆ ರಕ್ತ ದಾನ ಮಾಡಬಹುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ , ರಕ್ತ ನಿಧಿ ದೂ: 0820 2923191

Latest Indian news

Popular Stories