ಉಡುಪಿ | ರಸ್ತೆಯಲ್ಲಿ ದನದ ಕಳೇಬರ ಪ್ರಕರಣ – ಆರೋಪಿಗಳ ಬಂಧನಕ್ಕೆ ನೂರ್ ಜುಮ್ಮಾ ಮಸೀದಿ ಮನವಿ

ಉಡುಪಿ | ಕುಂಜಾಲಿನ ಭಾಗದಲ್ಲಿ ಕಿಡಿಗೇಡಿಗಳು ಗೋವಿನ ಕಳೇಬರಹಗಳನ್ನು ರಸ್ತೆಗೆ ಎಸೆದಿರುವ ಘಟನೆ ರಾತ್ರಿ ನಡೆದಿದ್ದು ಇದು ಖಂಡನೀಯ. ಈ ಭಾಗದಲ್ಲಿ ಇರುವ ಅನೋನ್ಯತೆ ಸಹೋದರತೆಯನ್ನು ಮತ್ತು ಶಾಂತಿಯನ್ನು ಕದಡಲು ಈ ರೀತಿ ಮಾಡುತ್ತಿರುವ ಬಗ್ಗೆ ಅನುಮಾನ ಮೂಡುತ್ತಿದ್ದು ಇಂತಹ ಘಟನೆ ಮರುಕಳಿಸದೆ ಇರುವಂತೆ ಮಾಡಲು ದುಷ್ಕರ್ಮಿಗಳನ್ನು ತಕ್ಷಣ ಬಂದಿಸುವಂತೆ ಹಾಗೂ ಮುಖ್ಯ ರಸ್ತೆಗಳ ಭಾಗದಲ್ಲಿ ಸಿಸಿ ಕ್ಯಾಮರ ಆಳವಡಿಸುವಂತೆ ಸಮಸ್ತ ಕುಂಜಾಲಿನ ಮುಸ್ಲಿಂ ಭಾಂದವರ ಪರವಾಗಿ ನೂರ್ ಜುಮ್ಮಾ ಮಸೀದಿ ಸಮಿತಿ ಆಗ್ರಹಿಸಿ ಬ್ರಹ್ಮಾವರ ಠಾಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ಬಗ್ಗೆ ಯಾವುದೇ ರಾಜಕೀಯ ಯಾವುದೇ ಸಂಘಟನೆಗಳ ಒತ್ತಡಕ್ಕೆ ಮಣಿಯದೆ ನೈಜ ಆರೋಪಿಗಳನ್ನು ಶಿಘ್ರವಾಗಿ ಬಂದಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಜಮಾಆತಿನ ಅಧ್ಯಕ್ಷರು ಮೊಹಮ್ಮದ್ ಶಬೀರ್, ಉಪಾದ್ಯಕ್ಷರು ಆಗಿರುವ ಸುಜಿದ್ ಖಾನ್,ಖಜಾಂಜಿ ಹಬೀಬ್ ಉಡುಪಿ, ಹಾತಿಂ ಸಾಹೇಬ್ ಕುಂಜಾಲ್ ಹಾಗೂ ಸ್ಥಳೀಯ ಮುಸ್ಲಿಂ ಭಾಂದವರು ಉಪಸ್ಥಿತರಿದ್ದು ಬ್ರಹ್ಮವಾರ ಠಾಣಾಧಿಕಾರಿಗೆ ಮನವಿ ನೀಡಿದರು..

Latest Indian news

Popular Stories