ಉಡುಪಿ: ಕಲ್ಸಂಕ ವೃತ್ತದ ಬಳಿ ಪ್ರಜ್ಞಾಹೀನಾ ಸ್ಥಿತಿಯಲ್ಲಿದ್ದ ಯುವಕನ ರಕ್ಷಣೆ

ಕಲ್ಸಂಕ ವೃತ್ತದ ಸನಿಹದ ಪಾದಚಾರಿ ರಸ್ತೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ, ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು, ರಕ್ಷಿಸಿ ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ.

ರಕ್ಷಿಸಲ್ಪಟ್ಟಿರುವ ಯುವಕನು ಮಾತನಾಡುವ ಸ್ಥಿತಿಯಲ್ಲಿಲ್ಲದರಿಂದ ಹೆಸರು ವಿಳಾಸ ತಿಳಿದುಬಂದಿಲ್ಲ. ಯುವಕನು ಮಾದಕದ್ರವ್ಯ ಸೇವನೆಯ ನಡೆಯಿಂದ ದೇಹ ನಿಯಂತ್ರಣ ಸಿಗದೆ ಬಿದ್ದಿರ ಬಹುದೆಂಬ ಶಂಕೆ ವ್ಯಕ್ತವಾಗಿದೆ.

Latest Indian news

Popular Stories