ಉತ್ತರ ಪ್ರದೇಶ :40 ವರ್ಷದ ದಲಿತ ಮಹಿಳೆಯನ್ನು ಅತ್ಯಾಚಾರವೆಸಗಿದ ನಂತರ ಕೊಲೆ ಮಾಡಿ ಆಕೆಯ ದೇಹವನ್ನು ತುಂಡು ತುಂಡುಗಳಾಗಿ ಕತ್ತರಿಸಿದ ಘಟನೆ ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ.
ಮಹಿಳೆ ರಾಜ್ ಕುಮಾರ್ ಶುಕ್ಲಾ ಅವರ ಹಿಟ್ಟಿನ ಗಿರಣಿಯನ್ನು ಸ್ವಚ್ಛಗೊಳಿಸಲು ಅವರ ಮನೆಗೆ ಹೋಗಿದ್ದರು. ಆಕೆಯ 20 ವರ್ಷದ ಮಗಳು ಅಲ್ಲಿಗೆ ತಲುಪಿದಾಗ, ಒಳಗಿನಿಂದ ಬೀಗ ಹಾಕಿದ ಕೋಣೆಯಿಂದ ತಾಯಿಯ ಕಿರುಚಾಟ ಕೇಳಿದೆ .ಸ್ವಲ್ಪ ಸಮಯದ ನಂತರ, ಕೋಣೆಯ ಬಾಗಿಲು ತೆರೆದಾಗ, ತಾಯಿಯ ದೇಹವು ಮೂರು ತುಂಡುಗಳಾಗಿ ಬಿದ್ದಿರುವುದನ್ನು ನೋಡಿದ ಹುಡುಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.
ಇದರ ನಂತರ ರಾಜ್ಕುಮಾರ್ ಶುಕ್ಲಾ, ಅವರ ಸಹೋದರ ಬೌವಾ ಶುಕ್ಲಾ ಮತ್ತು ರಾಮಕೃಷ್ಣ ಶುಕ್ಲಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.