ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ, ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ,ಭಟ್ಕಳತನಕ 130 ಕಿಮೀ ವ್ಯಾಪ್ತಿಯಲ್ಲಿ ಸತತ ಮಳೆ ಸುರಿಯುತ್ತಿದೆ. ಕಾರಣ ವಿದ್ಯಾರ್ಥಿ, ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ, ಪ್ರಾಥಮಿಕ,ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ . ಗುಡ್ಡ ಕುಸಿತದ ಪ್ರದೇಶದಲ್ಲಿ ಎಲ್ಲಾ ಮುಂಜಾಗ್ರತೆಯ ಕ್ರಮ ವಹಿಸಲಾಗಿದೆ. ಜನರು ಸುರಕ್ಷಿತ ವಾಗಿರಲು ಸೂಚಿಸಲಾಗಿದೆ. ಎಸ್ ಡಿ ಆರ್ ಎಫ್,ಎನ್ ಡಿ ಆರ್ ಎಫ್ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.
……
…