ವಿಜಯನಗರ: ತಡರಾತ್ರಿ ಯುವಕನ ಕೊಚ್ಚಿ ಕೊಲೆ

ವರದಿ : ಹಣಮಂತ ದೇಶಮುಖ

ವಿಜಯನಗರ: ತಡರಾತ್ರಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಬೇವಿನಹಳ್ಳಿಯ ತಾಂಡಾದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ದಾವಣಗೆರೆಯ ನಿಟ್ಟುವಳ್ಳಿ ಗ್ರಾಮದ ಧನ್ಯ ಕುಮಾರ್ (31) ಎಂದು ಗುರುತಿಸಲಾಗಿದೆ.


ಕೊಲೆಯಾದ ಧನ್ಯ ಕುಮಾರ್ ಕನ್ನಡ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವುದಾಗಿ ಹೇಳಲಾಗಿದೆ. ನಿನ್ನೆ ತಡರಾತ್ರಿ ಸ್ನೇಹಿತರ ಜೊತೆಗೆ ಊಟಕ್ಕೆ ಹೋಗಿದ್ದು, ಇಂದು ಬೆಳಿಗ್ಗೆ ಗ್ರಾಮದ ಜಮೀನು ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯ ಅರಸಿಕೆರೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೊಲೆ ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.

ವರದಿ : ಹಣಮಂತ ದೇಶಮುಖ

Latest Indian news

Popular Stories